Close Menu
  • ಪ್ರಮುಖ ಸುದ್ದಿ
    • ಅಡಿಕೆ ರೇಟ್‌
    • ಮಾರುಕಟ್ಟೆ ಧಾರಣೆ
  • ಅಪರಾಧ ಸುದ್ದಿ
  • ದಿನದ ವಿಶೇಷ
  • ನಮ್ಮ ಚಿತ್ರದುರ್ಗ
    • ಬಯಲುಸೀಮೆ ನೋಟ
What's Hot

ಮೇ ತಿಂಗಳ ಗೃಹಲಕ್ಷ್ಮಿ ಹಣ ಒಂದು ವಾರದಲ್ಲಿ ಜಮೆ ಮಾಡ್ತೀವಿ – ಲಕ್ಷ್ಮೀ ಹೆಬ್ಬಾಳ್ಕರ್

ದೇಶಕ್ಕೆ ಬಾಬು ಜಗಜೀವನರಾಂ ಕೊಡುಗೆ ಅಪಾರ – ತಾಜ್ ಪೀರ್

ಸರ್ಕಾರ ನಮ್ಮ ಜಾತಿಯ ಸಮೀಕ್ಷೆ ಸರಿಯಾಗಿ ಮಾಡಿಲ್ಲ – ಬಿ.ಎಸ್.ಸೋಮಶೇಖರ್

Facebook X (Twitter) Instagram
  • ಪ್ರಮುಖ ಸುದ್ದಿ
  • ನಮ್ಮ ಚಿತ್ರದುರ್ಗ
  • ಬಯಲುಸೀಮೆ ನೋಟ
Facebook X (Twitter) Instagram
Bayaluseeme Times | ಬಯಲುಸೀಮೆ ಟೈಮ್ಸ್
  • ಪ್ರಮುಖ ಸುದ್ದಿ
    • ಅಡಿಕೆ ರೇಟ್‌
    • ಮಾರುಕಟ್ಟೆ ಧಾರಣೆ
  • ಅಪರಾಧ ಸುದ್ದಿ
  • ದಿನದ ವಿಶೇಷ
  • ನಮ್ಮ ಚಿತ್ರದುರ್ಗ
    • ಬಯಲುಸೀಮೆ ನೋಟ
Subscribe
Bayaluseeme Times | ಬಯಲುಸೀಮೆ ಟೈಮ್ಸ್
Home»ಪ್ರಮುಖ ಸುದ್ದಿ»ಸಿಎಂ ಬದಲಾವಣೆ ಖಚಿತವಾಗಿದೆ – ವಿಪಕ್ಷ ನಾಯಕ ಆರ್‌.ಅಶೋಕ್
ಪ್ರಮುಖ ಸುದ್ದಿ

ಸಿಎಂ ಬದಲಾವಣೆ ಖಚಿತವಾಗಿದೆ – ವಿಪಕ್ಷ ನಾಯಕ ಆರ್‌.ಅಶೋಕ್

Bayaluseeme TimesBy Bayaluseeme TimesJuly 5, 2025No Comments2 Mins Read
Share WhatsApp Facebook Twitter Telegram Copy Link
Follow Us
Google News Flipboard
Share
Facebook Twitter LinkedIn Pinterest Email Copy Link

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಲವಾರು ಬಾರಿ ಅಧಿಕಾರಿಗಳ ವಿರುದ್ಧ ಅವಹೇಳನಕಾರಿಯಾಗಿ ಮಾತಾಡಿದ್ದಾರೆ. ಅವರ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ..? ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಪ್ರಶ್ನಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಪರಿಷತ್‌ ಸದಸ್ಯರಾದ ಎನ್‌.ರವಿಕುಮಾರ್‌ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಕಾಂಗ್ರೆಸ್‌ ನಾಯಕರು ಆರೋಪಿಸಿದ್ದಾರೆ. ಐಎಎಸ್‌ ಅಧಿಕಾರಿಯಾದ ಜಿಲ್ಲಾಧಿಕಾರಿ ಹಾಗೂ ಪೊಲೀಸ್‌ ಅಧಿಕಾರಿ ವಿರುದ್ಧ ಸಿಎಂ ಸಿದ್ದರಾಮಯ್ಯ ಅವಹೇಳನಕಾರಿಯಾಗಿ ಮಾತನಾಡಿದ್ದರು. ಆದರೂ ಕ್ರಮ ಕೈಗೊಳ್ಳಲಿಲ್ಲ. ರಾಜ್ಯದಲ್ಲಿ ಎಲ್ಲೂ ಅಭಿವೃದ್ಧಿ ಕಾರ್ಯ ನಡೆಯದೆ, ಶಾಸಕರು ದಂಗೆ ಏಳುತ್ತಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ಹೈಕೋರ್ಟ್‌ ಸೂಚಿಸಿದೆ. ಈ ಸಮಸ್ಯೆಗಳನ್ನು ಮರೆಮಾಚಲು ರವಿಕುಮಾರ್‌ ಹೇಳಿಕೆಯನ್ನು ವಿವಾದ ಮಾಡಲಾಗಿದೆ ಎಂದರು.

ಬಿಜೆಪಿಯವರು ಮಾಡಿದರೆ ಎಫ್‌ಐಆರ್‌ ದಾಖಲಿಸುತ್ತಾರೆ. ಕಾಂಗ್ರೆಸ್‌ನವರು ಮಾಡಿದರೆ ಯಾವುದೇ ದೂರು ದಾಖಲಾಗುವುದಿಲ್ಲ. ಸಿಎಂ ಸಿದ್ದರಾಮಯ್ಯ ಎಲ್ಲರನ್ನೂ ಏಕವಚನದಲ್ಲೇ ಕರೆಯುತ್ತಾರೆ. ರಾಷ್ಟ್ರಪತಿಗಳಿಗೆ ಗೌರವ ಕೊಡದೆ ಏಕವಚನದಲ್ಲೇ ಮಾತಾಡುತ್ತಾರೆ. ಅಂದರೆ ಕಾಂಗ್ರೆಸ್‌ಗೆ ಬೇರೆಯೇ ರೀತಿಯ ಕಾನೂನು ಇದೆ ಎಂದಾಯಿತು. ರವಿಕುಮಾರ್‌ ಯಾವ ರೀತಿಯ ಅಶ್ಲೀಲ ಹೇಳಿಕೆ ನೀಡಿದ್ದಾರೆಂದು ಕಾಂಗ್ರೆಸ್‌ ಸ್ಪಷ್ಟಪಡಿಸಲಿ ಎಂದರು.ಹಾಸನದಲ್ಲಿ ಸರಣಿ ಹೃದಯಾಘಾತ ಪ್ರಕರಣ ಕಂಡುಬಂದರೂ ಜಿಲ್ಲಾ ಉಸ್ತುವಾರಿ ಸಚಿವರು ಆಸ್ಪತ್ರೆಗಳಿಗೆ ಭೇಟಿ ನೀಡಿಲ್ಲ. ಕೋವಿಡ್‌ ಲಸಿಕೆಯಿಂದ ಹೀಗಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕೋವಿಡ್‌ ಲಸಿಕೆಯನ್ನು ಇಡೀ ದೇಶದ ಜನರಿಗೆ ನೀಡಲಾಗಿದೆ. ಈ ಬಗ್ಗೆ ಕ್ರಮ ಕೈಗೊಳ್ಳದೆ ಲಸಿಕೆ ಬಗ್ಗೆ ಆರೋಪ ಮಾಡಲಾಗುತ್ತಿದೆ ಎಂದು ದೂರಿದರು.

ಚಿಕ್ಕಮಗಳೂರು, ಕೊಡಗು, ಸಕಲೇಶಪುರದಲ್ಲಿ ಕಾಫಿ ಬೆಳೆ ಹಾನಿಯಾಗಿದ್ದರೂ, ತೋಟಗಾರಿಕೆ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು ರೈತರನ್ನು ಭೇಟಿ ಮಾಡಿಲ್ಲ. ನಾನು ಹಾಸನಕ್ಕೆ ಭೇಟಿ ನೀಡಿ, ಹೃದಯಾಘಾತ ಹಾಗೂ ಕಾಫಿ ಬೆಳೆ ನಾಶದ ಬಗ್ಗೆ ವಿಚಾರಿಸುತ್ತೇನೆ. ಸರ್ಕಾರ ಕೂಡ ಈ ಕೆಲಸವನ್ನು ಕೂಡಲೇ ಮಾಡಬೇಕು. ಇನ್ನೂ ಯಾರು ಮುಖ್ಯಮಂತ್ರಿ ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆಯೇ ಹೊರತು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚೆ ನಡೆಯುತ್ತಿಲ್ಲ. ಎರಡೂವರೆ ವರ್ಷವಾದರೂ ಸರ್ಕಾರ ಟೇಕಾಫ್‌ ಆಗಿಲ್ಲ ಎಂದರು.ಮೊದಲು ನಮ್ಮ ರೈತರಿಗೆ ನೀರು ನೀಡಿ, ಮತ್ತೆ ತಮಿಳುನಾಡಿಗೆ ನೀರು ನೀಡಿ ಎಂದು ರೈತರು ಒತ್ತಾಯಿಸಿದ್ದಾರೆ. ತಮಿಳುನಾಡು ಸರ್ಕಾರದ ಜೊತೆಗಿನ ಸ್ನೇಹಕ್ಕಾಗಿ ಇಲ್ಲಿನ ಕಾಂಗ್ರೆಸ್‌ ಸರ್ಕಾರ ರೈತರಿಗೆ ವಂಚಿಸುತ್ತಿದೆ. ಆರ್‌ಎಸ್‌ಎಸ್‌ಗೆ ಯಾರೂ ಏನೂ ಮಾಡಲು ಸಾಧ್ಯವಿಲ್ಲ.

ಇಂದಿರಾಗಾಂಧಿ ಹಾಗೂ ರಾಜೀವ್‌ಗಾಂಧಿಗೆ, ಆರ್‌ಎಸ್‌ಎಸ್‌ಗೆ ಏನೂ ಮಾಡಲು ಸಾಧ್ಯವಾಗಿಲ್ಲ. ಅಂದಿನ ಪ್ರಧಾನಿ ನೆಹರೂ ಯೋಧರಿಗೆ ರಕ್ತ ನೀಡಲು ಆರ್‌ಎಸ್‌ಎಸ್‌ನ ಸಹಾಯ ಪಡೆದಿದ್ದರು. ಅಧಿಕಾರವಿದ್ದಾಗಲೇ ಕಾಂಗ್ರೆಸ್‌ಗೆ ಆರ್‌ಎಸ್‌ಎಸ್‌ ವಿರುದ್ಧ ಕ್ರಮ ಕೈಗೊಳ್ಳಲು ಸಾಧ್ಯವಾಗಲಿಲ್ಲ. ಇನ್ನು ಅಧಿಕಾರಕ್ಕೆ ಬರುವ ಅವಕಾಶವೂ ಇಲ್ಲ. ಕಾಂಗ್ರೆಸ್‌ ಮುಕ್ತ ಭಾರತ ನಿರ್ಮಾಣವಾಗಲಿದೆ.ಸಿಎಂ ಕುರ್ಚಿ ಬದಲಾವಣೆ ಖಚಿತವಾಗಿದೆ. ಕಾಂಗ್ರೆಸ್‌ ಶಾಸಕರು ಕೂಡ ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆಂದು ಭವಿಷ್ಯ ನುಡಿಯುತ್ತಿದ್ದಾರೆ. ಡಿ.ಕೆ.ಶಿವಕುಮಾರ್‌ ದೇವಾಲಯಗಳಿಗೆ ಹೋಗಿ ಪೂಜೆ ಮಾಡಿಸುತ್ತಿರುವುದು ಅದರ ಲಕ್ಷಣ. ಬಿಜೆಪಿಗೆ ಮದ್ದು ಅರೆಯುವ ಮೊದಲು ಕಾಂಗ್ರೆಸ್‌ಗೆ ಕಾಂಗ್ರೆಸ್ಸೇ ಮದ್ದು ಅರೆಯಲಿ ಎಂದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿ‌ನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

bayaluseeme times ads (2)
ashok change cm
Follow on Google News Follow on Instagram
Share. Facebook Twitter Telegram WhatsApp
Previous Articleಪ್ರವಾಸಿ ಮಂದಿರದಲ್ಲಿ ಏರ್ಪಡಿಸಲಾಗಿದ್ದ ವಿಚಾರ ಗೋಷ್ಟಿಯನ್ನುದ್ದೇಶಿಸಿ ಹಿರಿಯ ನ್ಯಾಯವಾದಿ ಬಿ.ಕೆ.ರಹಮತ್‍ವುಲ್ಲಾ ಮಾತನಾಡಿದರು.
Next Article ಕುರಿ ಶೆಡ್ ಬಿಲ್ ಮಾಡೋಕೆ ಪಿಡಿಒ ಲಂಚ ಪಡೆದ ಆರೋಪ – ಪಿಡಿಒ ಅಮಾನತಿಗೆ ಸ್ಥಳೀಯರ ಆಗ್ರಹ
Bayaluseeme Times
  • Website

Related Posts

ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗೋದು ಗ್ಯಾರಂಟಿ: ವಿಪಕ್ಷ ನಾಯಕ ಆರ್‌.ಅಶೋಕ್

July 6, 2025

ಕುರಿ ಶೆಡ್ ಬಿಲ್ ಮಾಡೋಕೆ ಪಿಡಿಒ ಲಂಚ ಪಡೆದ ಆರೋಪ – ಪಿಡಿಒ ಅಮಾನತಿಗೆ ಸ್ಥಳೀಯರ ಆಗ್ರಹ

July 5, 2025

ಅಕ್ರಮವಾಗಿ ನೆಲಸಿದ್ದ 250 ಬಾಂಗ್ಲಾ ಪ್ರಜೆಗಳ ಗಡೀಪಾರು

July 5, 2025
Add A Comment
Leave A Reply Cancel Reply

Advertisement
Latest Posts

ಮೇ ತಿಂಗಳ ಗೃಹಲಕ್ಷ್ಮಿ ಹಣ ಒಂದು ವಾರದಲ್ಲಿ ಜಮೆ ಮಾಡ್ತೀವಿ – ಲಕ್ಷ್ಮೀ ಹೆಬ್ಬಾಳ್ಕರ್

ದೇಶಕ್ಕೆ ಬಾಬು ಜಗಜೀವನರಾಂ ಕೊಡುಗೆ ಅಪಾರ – ತಾಜ್ ಪೀರ್

ಸರ್ಕಾರ ನಮ್ಮ ಜಾತಿಯ ಸಮೀಕ್ಷೆ ಸರಿಯಾಗಿ ಮಾಡಿಲ್ಲ – ಬಿ.ಎಸ್.ಸೋಮಶೇಖರ್

ನನ್ನ ಕ್ಷೇತ್ರದಲ್ಲಿ ನೀರಾವರಿ ಅಭಿವೃದ್ಧಿಗೆ ನನ್ನ ಕೊಡುಗೆ ಇದೆ – ಶಾಸಕ ಎಂ.ಚಂದ್ರಪ್ಪ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2025 Bayaluseeme Time. Designed by Bayaluseeme time
  • Privacy Policy
  • Terms
  • Accessibility

Type above and press Enter to search. Press Esc to cancel.